ಜಿ.ಎಸ್.ಭಟ್ಟ ಅವರ ‘ಅಕ್ಕಮ್ಮಜ್ಜಿಯ ಗಂಡನೂ ವಾಣಸಜ್ಜನ ಹೆಂಡ್ತಿಯೂ’ ಕಾದಂಬರಿಗೆ ಕುವೆಂಪು ಬಹುಮಾನ, ಪಾರ್ವತಿ ಜಿ. ಐತಾಳ್ ಅವರ ‘ಮಲೆಯಾಳದ ಮಹಿಳಾ ಕಥನ’ ಅನುವಾದ ಕೃತಿಗೆ ಪ್ರೊ.ಎಸ್.ಬಿ.ಪರಮೇಶ್ವರ ಭಟ್ಟ, ಡಾ.ವಿನಯಾ ಅವರ ‘ಉಡಿಯಕ್ಕಿ’ ಕೃತಿಗೆ ಎಂ.ಕೆ.ಇಂದಿರಾ, ಪ್ರೊ ಅಬ್ದುಲ್ ಬಷೀರ್ ಅವರ ‘ಧರ್ಮ ಸಮನ್ವಯ ಸಾಹಿತ್ಯ ವಿಮರ್ಶೆ’ ಕೃತಿಗೆ ಪಿ.ಲಂಕೇಶ್, ನಂದಿನಿ ವಿಶ್ವನಾಥ್ ಹೆದ್ದುರ್ಗ ಅವರ ‘ಒಳಸೆಲೆ’ ಕವನ ಸಂಕಲನಕ್ಕೆ ಡಾ.ಜಿ.ಎಸ್. ಶಿವರುದ್ರಪ್ಪ, ನರೇಂದ್ರ ರೈ ದೇರ್ಲಾ ಅವರ ‘ನೆಲಮುಖ’ ಅಂಕಣ ಬರಹಕ್ಕೆ ಡಾ.ಹಾ.ಮಾ.ನಾಯಕ, ಎಸ್.ಗಂಗಾಧರಯ್ಯ ಅವರ ‘ದೇವರ ಕುದುರೆ’ ಸಣ್ಣ ಕಥಾ ಸಂಕಲನಕ್ಕೆ ಡಾ.ಯು.ಆರ್. ಅನಂತಮೂರ್ತಿ, ದು.ಸರಸ್ವತಿ ಅವರ ‘ಸಣ್ತಿಮ್ಮಿ ಪುರಾಣ’ ನಾಟಕಕ್ಕೆ ಡಾ.ಕೆ.ವಿ. ಸುಬ್ಬಣ್ಣ, ಪ್ರಸಾದ್ ನಾಯ್ಕ ಅವರ ‘ಹಾಯ್ ಅಂಗೋಲಾ’ ಪ್ರವಾಸ ಸಾಹಿತ್ಯಕ್ಕೆ ಕುಕ್ಕೆ ಸುಬ್ರಹ್ಮಣ್ಯ ಶಾಸ್ತ್ರಿ, ಡಾ.ಪಾಲಹಳ್ಳಿ ವಿಶ್ವನಾಥ್ ಅವರ ‘ವಿಶ್ವದ ವೈವಿಧ್ಯ’ ವಿಜ್ಞಾನ ಸಾಹಿತ್ಯ ಕೃತಿಗೆ ಹಸೂಡಿ ವೆಂಕಟಶಾಸ್ತ್ರಿ, ನಿರ್ಮಲಾ ಸುರತ್ಕಲ್ ಅವರ ‘ಹೇಳು ನೋಡೋಣ’ ಮಕ್ಕಳ ಸಾಹಿತ್ಯ ಕೃತಿಗೆ ಡಾ.ನಾ.ಡಿಸೋಜ ಬಹುಮಾನ ಹಾಗೂ ಡಾ.ಪತಂಜಲಿ ಅವರ ‘ಅಜೀರ್ಣ’ ವೈದ್ಯ ಸಾಹಿತ್ಯ ಕೃತಿಗೆ ಡಾ.ಎಚ್.ಡಿ. ಚಂದ್ರಪ್ಪಗೌಡ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.