ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಗೋಲಿಯಾಡಲು ಹೋಗುವುದಿಲ್ಲ: ಜೊಲ್ಲೆ

Last Updated 23 ಫೆಬ್ರುವರಿ 2020, 20:07 IST
ಅಕ್ಷರ ಗಾತ್ರ

ನಿಪ್ಪಾಣಿ(ಬೆಳಗಾವಿ): ‘ನಾವು ಬೆಂಗಳೂರಿಗೆ ಗೋಲಿಯಾಟ, ಚಿನ್ನಿ–ದಾಂಡು ಆಡಲು ಹೋಗುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ತರಲು ಹೋಗುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಭಾನುವಾರ ಇಲ್ಲಿನ ಬಸವಜೋತಿ ಗಾರ್ಮೆಂಟ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗೆ ಜಲಸಂಪನ್ಮೂಲ ಸಚಿವರು ಅನುಮೋದನೆ ಕೊಡಿಸಿದ್ದಾರೆ. ಆದರೂ ಕೆಲವರು ತಪ್ಪು ದಾರಿಗೆ ಎಳೆಯುತ್ತಿರುವುದು ಸರಿಯಲ್ಲ’ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.

‘ಕಾಂಗ್ರೆಸ್ ಸರ್ಕಾರವಿದ್ದಾಗಲೂ ಕ್ಷೇತ್ರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೆ. ಈಗಂತೂ ನಮ್ಮ ಸರ್ಕಾರವೇ ಇದೆ. ಇನ್ನೂ ಹಲವು ಕಾಮಗಾರಿ ತರಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT