ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಸೋಮವಾರ ಭೇಟಿ ಮಾಡಿದ ಕಾನೂನು ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅರ್ಥಶಾಸ್ತ್ರ ವಿಶ್ವವಿದ್ಯಾಲಯ ಮಸೂದೆಗೆ ಅನುಮೋದನೆ ನೀಡಲು ಕೋರಿದರು.
ಈ ಎರಡೂ ಮಸೂದೆಗಳು ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಬಂಧನೆಗೆ ವ್ಯತಿರಿಕ್ತವಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ವಾಲಾ ಮರಳಿಸಿದ್ದರು.