ಬೆಂಗಳೂರು: ಶಿಕ್ಷಕರ ವರ್ಗಾವಣಾ ಕಾಯ್ದೆ 2020 ಕುರಿತು ಶಿಕ್ಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆದಿದ್ದು ಶಿಕ್ಷಕರ ವರ್ಗಾವಣಾ ಕಾಯ್ದೆ-2020ರಲ್ಲಿ ಕೆಲವು ಅಂಶಗಳಲ್ಲಿ ತಿದ್ದುಪಡಿ ತಂದು ಅಂತಿಮ ನಿಯಮಗಳನ್ನು ರೂಪಿಸಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೆ, ಶೇ.25ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳಿರುವ ತಾಲೂಕಿನಿಂದ ವರ್ಗಾವಣೆ ಇಲ್ಲವೆಂಬ ಅಂಶ ಅತ್ಯಂತ ಮಾರಕವಾಗಿದೆ. ಶಿಕ್ಷಕ ಭಾದಕ ನಿಯಮವಾಗಿದೆ. ಇದನ್ನು ಸಂಪೂರ್ಣ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.