ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ವಿವಿ ಕುಲಸಚಿವ ಬದಲು

ಲೈಂಗಿಕ ಕಿರುಕುಳ, ಕೃತಿಚೌರ್ಯ ಆರೋಪ
Last Updated 2 ಫೆಬ್ರುವರಿ 2019, 19:31 IST
ಅಕ್ಷರ ಗಾತ್ರ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರನ್ನು ಬದಲಾಯಿಸಿ, ಸರ್ಕಾರ ಆದೇಶ ಹೊರಡಿಸಿದೆ.

ಲೈಂಗಿಕ ಕಿರುಕುಳ ಹಾಗೂ ಕೃತಿಚೌರ್ಯ ಆರೋಪ ಎದುರಿಸುತ್ತಿರುವ ಪ್ರೊ.ಕಲ್ಲಪ್ಪ ಹೊಸಮನಿ ಅವರನ್ನು ಬದಲಾಯಿಸಿದ್ದು, ಅವರ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆ ಇಲಾಖಾ ವಿಚಾರಣೆ ನಡೆಸುವಂತೆ ಕುಲಪತಿಗೆ ಸೂಚಿಸಲಾಗಿದೆ.

ಹೊಸಮನಿ ಅವರನ್ನು ರಸಾಯನವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹುದ್ದೆಗೆ ಮರಳಿ ಕಳುಹಿಸುವಂತೆ ತಿಳಿಸಲಾಗಿದೆ. ಜತೆಗೆ, ಸರ್ಕಾರದಿಂದ ಮುಂದಿನ ನೇಮಕಾತಿ ಆಗುವವರೆಗೂ ಮನೋವಿಜ್ಞಾನ ವಿಭಾಗದ ಪ್ರೊ. ವಿಜಯಲಕ್ಷ್ಮಿ ಅಮ್ಮಿನಭಾವಿ ಅವರನ್ನು ಹಂಗಾಮಿ ಕುಲಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT