‘ಈ ಯೋಜನೆಜಾರಿಯಾದರೆತಮ್ಮ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ, ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಇದೆ. ಹಾಗಾಗಿ ಬಹುಪಾಲು ಜನರು ಇದರ ಪರವಾಗಿದ್ದಾರೆ. ಆದರೆ, ಕೆಲವರು ಮಾಲಿನ್ಯದ ಪ್ರಮಾಣದಲ್ಲಿ ಹೆಚ್ಚಳ, ಕೃಷಿ ಉತ್ಪಾದನೆಯಲ್ಲಿ ಕುಂಠಿತ ಹಾಗೂ ವಾಹನ ದಟ್ಟಣೆ ಹೆಚ್ಚಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರವನ್ನು ಸಮಿತಿ ಗಮನಿಸಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.