ನವದೆಹಲಿ/ಮುಂಬೈ: ಕೇಂದ್ರದಲ್ಲಿ ಲೋಕಪಾಲರು ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ನೇಮಿಸುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸೋಮವಾರ 4ನೇ ದಿನಕ್ಕೆ ಕಾಲಿಟ್ಟಿದೆ.
ಇಲ್ಲಿನ ರಾಮಲೀಲಾ ಮೈದಾನದಲ್ಲಿ ಮಾರ್ಚ್ 23ರಿಂದ ಸತ್ಯಾಗ್ರಹ ಕೈಗೊಂಡಿದ್ದು, ಅವರ ತೂಕ 4 ಕೆ.ಜಿ. ಕಡಿಮೆಯಾಗಿದೆ ಎಂದು ಹಜಾರೆ ನಿಕಟವರ್ತಿ ದತ್ತ ಅವಾರಿ ಮಾಹಿತಿ ನೀಡಿದ್ದಾರೆ.
ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಅವರ ತವರು ಗ್ರಾಮ ರಾಳೇಗಣ ಸಿದ್ಧಿಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಸ್ಥಳೀಯ ಹೋರಾಟಗಾರರು ನೀರಿನ ಟ್ಯಾಂಕ್ ಮೇಲೆ ಕುಳಿತು ಹಜಾರೆ ಪರ ಘೋಷಣೆ ಕೂಗಿದ್ದಾರೆ.