‘ವಿವಿಧ ಸಚಿವಾಲಯದ ಸೆಕ್ಷನ್ ಅಧಿಕಾರಿಗಳು, ಅಧೀನ ಕಾರ್ಯದರ್ಶಿಗಳು, ಇತರ ಶ್ರೇಣಿಯ ಅಧಿಕಾರಿಗಳು ಅಲ್ಲದೆ, ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ವಿವಿಧ ರೀತಿಯ ಪ್ರಭಾವ ಬೀರಿ ತಹಶೀಲ್ದಾರ್ ಆಗಿ ನೇಮಕ ಹೊಂದಿದ್ದಾರೆ. ಈ ಅಧಿಕಾರಿಗಳಿಗೆ ಕಂದಾಯ ಇಲಾಖೆಯ ಪೂರ್ಣ ಮಾಹಿತಿ ಇರುವುದಿಲ್ಲ. ದಕ್ಷತೆಯಿಂದ ಕೆಲಸ ನಿರ್ವಹಿಸಲು ವಿಫಲರಾಗುತ್ತಿದ್ದಾರೆ. ತಾಲ್ಲೂಕು ಕಚೇರಿಯ ಅಧೀನ ಅಧಿಕಾರಿಗಳ ನಿರ್ದೇಶನದಂತೆ ಕೆಲಸ ನಿರ್ವಹಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಇದರಿಂದ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.