<p><strong>ಮೈಸೂರು</strong>: ‘ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದು ಸರಿಯಾದ ಕ್ರಮ’ ಎಂದು ಇಲ್ಲಿಗೆ ಬಂದಿರುವ ಕಾಶ್ಮೀರದ ಬಹುತೇಕ ಯುವಕರು ಅಭಿಪ್ರಾಯಪಟ್ಟರು.</p>.<p>ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಗೃಹ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ನೆಹರು ಯುವ ಕೇಂದ್ರದ ವತಿಯಿಂದ ಇಲ್ಲಿನ ಯೂತ್ ಹಾಸ್ಟೆಲ್ನಲ್ಲಿ ಶುಕ್ರವಾರ ನಡೆದ ‘ಕಾಶ್ಮೀರಿ ಯುವಜನ ವಿನಿಮಯ ಕಾರ್ಯಕ್ರಮ’ದಲ್ಲಿ ಭಾಗಿಯಾಗಿದ್ದವರು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಆರೀಫ್ ಮುಸ್ತಾಫ್, ‘370ನೇ ವಿಧಿಯನ್ನು ರದ್ದುಗೊಳಿಸಿದ್ದು ಸರಿಯಾದ ಕ್ರಮ ಎಂದು ಈಗ ಅನ್ನಿಸುತ್ತಿದೆ. ಕ್ರಮೇಣ ಹೊಸ ಪರಿಸ್ಥಿತಿಗೆ ಜನರು ಹೊಂದಿಕೊಳ್ಳುತ್ತಿದ್ದಾರೆ. ಕಾಶ್ಮೀರವೂ ಕರ್ನಾಟಕದಂತೆ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ತೀರ್ಮಾನವನ್ನು ಬೆಂಬಲಿಸುತ್ತೇವೆ’ ಎಂದರು.</p>.<p>ಮಾರ್ಚ್ 11ರವರೆಗೆ ಇಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಶ್ಮೀರದ 132 ಯುವಕ–ಯುವತಿಯರು ಭಾಗವಹಿಸಲಿದ್ದಾರೆ. ಸದ್ಯ, 88 ಮಂದಿ ಬಂದಿದ್ದು, ಇಲ್ಲಿನ ಸಂಸ್ಕೃತಿ, ಕಲೆಗಳನ್ನು ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದು ಸರಿಯಾದ ಕ್ರಮ’ ಎಂದು ಇಲ್ಲಿಗೆ ಬಂದಿರುವ ಕಾಶ್ಮೀರದ ಬಹುತೇಕ ಯುವಕರು ಅಭಿಪ್ರಾಯಪಟ್ಟರು.</p>.<p>ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಗೃಹ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ನೆಹರು ಯುವ ಕೇಂದ್ರದ ವತಿಯಿಂದ ಇಲ್ಲಿನ ಯೂತ್ ಹಾಸ್ಟೆಲ್ನಲ್ಲಿ ಶುಕ್ರವಾರ ನಡೆದ ‘ಕಾಶ್ಮೀರಿ ಯುವಜನ ವಿನಿಮಯ ಕಾರ್ಯಕ್ರಮ’ದಲ್ಲಿ ಭಾಗಿಯಾಗಿದ್ದವರು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಆರೀಫ್ ಮುಸ್ತಾಫ್, ‘370ನೇ ವಿಧಿಯನ್ನು ರದ್ದುಗೊಳಿಸಿದ್ದು ಸರಿಯಾದ ಕ್ರಮ ಎಂದು ಈಗ ಅನ್ನಿಸುತ್ತಿದೆ. ಕ್ರಮೇಣ ಹೊಸ ಪರಿಸ್ಥಿತಿಗೆ ಜನರು ಹೊಂದಿಕೊಳ್ಳುತ್ತಿದ್ದಾರೆ. ಕಾಶ್ಮೀರವೂ ಕರ್ನಾಟಕದಂತೆ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ತೀರ್ಮಾನವನ್ನು ಬೆಂಬಲಿಸುತ್ತೇವೆ’ ಎಂದರು.</p>.<p>ಮಾರ್ಚ್ 11ರವರೆಗೆ ಇಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಶ್ಮೀರದ 132 ಯುವಕ–ಯುವತಿಯರು ಭಾಗವಹಿಸಲಿದ್ದಾರೆ. ಸದ್ಯ, 88 ಮಂದಿ ಬಂದಿದ್ದು, ಇಲ್ಲಿನ ಸಂಸ್ಕೃತಿ, ಕಲೆಗಳನ್ನು ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>