<p><strong>ಬೆಂಗಳೂರು:</strong> "ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ಖಾಲಿ ಇರುವ ನ್ಯಾಯಾಂಗ ಮತ್ತು ಆಡಳಿತ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ದಿಸೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>"ಲೋಕಸಭೆ ಚುನಾವಣೆ ಇದ್ದ ಕಾರಣ ಸಚಿವ ಸಂಪುಟದ ಸಭೆ ಈ ವಿಷಯವನ್ನು ಚರ್ಚಿಸಲು ಆಗಿಲ್ಲ" ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಂಗಳವಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ತಿಳಿಸಿದರು.</p>.<p>ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.</p>.<p>"ಕೆಎಟಿಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು" ಎಂದು ಕೋರಿ ನಗರದ ವಕೀಲರಾದ ಕೆ.ಸತೀಶ್ ಭಟ್, ಎಂ.ಲೋಕೇಶ್ ಮತ್ತು ಎಂ.ಕೆ.ಪೃಥ್ವೀಶ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.</p>.<p>"ಕೆಎಟಿಯಲ್ಲಿ ಸದ್ಯ ಒಬ್ಬ ಅಧ್ಯಕ್ಷರು ಮತ್ತು ಒಬ್ಬ ಆಡಳಿತ ಸದಸ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> "ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ಖಾಲಿ ಇರುವ ನ್ಯಾಯಾಂಗ ಮತ್ತು ಆಡಳಿತ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ದಿಸೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>"ಲೋಕಸಭೆ ಚುನಾವಣೆ ಇದ್ದ ಕಾರಣ ಸಚಿವ ಸಂಪುಟದ ಸಭೆ ಈ ವಿಷಯವನ್ನು ಚರ್ಚಿಸಲು ಆಗಿಲ್ಲ" ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮಂಗಳವಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ತಿಳಿಸಿದರು.</p>.<p>ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.</p>.<p>"ಕೆಎಟಿಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು" ಎಂದು ಕೋರಿ ನಗರದ ವಕೀಲರಾದ ಕೆ.ಸತೀಶ್ ಭಟ್, ಎಂ.ಲೋಕೇಶ್ ಮತ್ತು ಎಂ.ಕೆ.ಪೃಥ್ವೀಶ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.</p>.<p>"ಕೆಎಟಿಯಲ್ಲಿ ಸದ್ಯ ಒಬ್ಬ ಅಧ್ಯಕ್ಷರು ಮತ್ತು ಒಬ್ಬ ಆಡಳಿತ ಸದಸ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>