ದುರ್ಗಾಪರಮೇಶ್ವರಿಗೆ ಅರ್ಪಿಸಲು ಹೊರೆಕಾಣಿಕೆಯ ಮೂಲಕ ಅಪಾರ ಪ್ರಮಾಣದ ತರಕಾರಿ, ಸಾಮಗ್ರಿಗಳು ದೇವಸ್ಥಾನಕ್ಕೆ ಬಂದಿದ್ದು, ಬಹಳಷ್ಟು ಭಕ್ತರು ಸ್ವಯಂಪೇರಿತರಾಗಿ ತರಕಾರಿಗಳನ್ನು ಕತ್ತರಿಸುವುದು, ಅಡುಗೆ ತಯಾರಿಯಲ್ಲಿ ಪಾಲ್ಗೊಳ್ಳುವ ಮೂಲಕ ಸೇವೆ ಸಲ್ಲಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ಸಹ, ಅಡುಗೆಮನೆಯಲ್ಲಿ ತರಕಾರಿಗಳನ್ನು ಕತ್ತರಿಸುವ ಮೂಲಕ ಸೇವೆ ಸಲ್ಲಿಸಿದರು. ಬಿಸಿಲಿನ ತಾಪ ಹೆಚ್ಚಿದ್ದರಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ಪಾನಕ, ಮಜ್ಜಿಗೆ ವಿತರಿಸಲಾಯಿತು.