‘ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರು ನೀಡಿರುವ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಎಲ್ಲವೂ ಹೈಕಮಾಂಡ್ ಎನ್ನುತ್ತಾರೆ. ತಾವೇ ದೆಹಲಿಗೆ ಹೋಗಿ ಷರತ್ತು ಹಾಕಿ ಬರುತ್ತಾರೆ. ಇಂತಹವರೇ ಅಧ್ಯಕ್ಷ, ಕಾರ್ಯಾಧ್ಯಕ್ಷರು ಆಗಬೇಕು ಎಂದು ಒತ್ತಾಯಿಸುತ್ತಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.