<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.</p>.<p>ಕಾಮಗಾರಿಯನ್ನು ಕಡ್ಡಾಯವಾಗಿ ಬಿಬಿಎಂಪಿ ಅನುದಾನದಲ್ಲೇ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿಯು ಮುಂದಿನ ಸಾಲಿನ ಬಜೆಟ್ನಲ್ಲಿ ಮೀಸಲಿಡಬೇಕು. ಕಾಮಗಾರಿಯನ್ನು ಕೆಟಿಪಿಪಿ ಕಾಯ್ದೆ/ನಿಯಮಗಳಿಗೆ ಅನುಸಾರವಾಗಿಯೇ ಅನುಷ್ಠಾನಗೊಳಿಸಬೇಕು ಎಂದು ಇಲಾಖೆ ಷರತ್ತು ವಿಧಿಸಿದೆ.</p>.<p>ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆಯನ್ನು ಮಾತ್ರ ನೀಡಲಾಗಿದೆ. ಟೆಂಡರ್ಗೆ ಪ್ರತ್ಯೇಕವಾಗಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ಇಲಾಖೆಸ್ಪಷ್ಟಪಡಿಸಿದೆ.</p>.<p>ಬಿಬಿಎಂಪಿ 2017–18ನೇ ಸಾಲಿನ ಬಜೆಟ್ನಲ್ಲಿ ಈ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರಕ್ಕೆ ₹ 50 ಕೋಟಿ ಅನುದಾನ ಮೀಸಲಿಟ್ಟಿತ್ತು. ಈ ಕಾಮಗಾರಿಗೆ ಅನುಮೋದನೆ ನಿರೀಕ್ಷಿಸಿ ಜಾಬ್ ಕೋಡ್ (129–18–000001) ನೀಡಲಾಗಿತ್ತು. ಕಾಮಗಾರಿಯ ವಿಸ್ತೃತ ಯೋಜನಾ ವರದಿ ಅಂದಾಜುಪಟ್ಟಿ ತಯಾರಿಗೆ ರಾಜರಾಜೇಶ್ವರಿನಗರ ಕಾರ್ಯಪಾಲಕ ಎಂಜಿನಿಯರ್ ಅವರು ಎಸಿಎಸ್ ಡಿಸೈನ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2017ರ ಅ.9ರಂದು ಕಾರ್ಯಾದೇಶ ನೀಡಿದ್ದರು.</p>.<p>ಅದರಂತೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮತ್ತು ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರ ನಡುವೆ ಒಪ್ಪಂದ ನಡೆದಿತ್ತು. ಪಾಲಿಕೆಯು 2018–19ನೇ ಸಾಲಿನ ಬಜೆಟ್ನಲ್ಲಿ ಈ ಪೀಠಕ್ಕೆ ₹10 ಲಕ್ಷ ಅನುದಾನವನ್ನು ಮಾತ್ರ ಮೀಸಲಿಟ್ಟಿತ್ತು.</p>.<p>ಪೀಠದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಪಾಲಿಕೆ2019ರ ಮೇ 21ರಂದು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. 2019ರ ನ.04ರಂದು ನಡೆದ ಅಧಿಕಾರಯುಕ್ತ ಸಮಿತಿ ಸಭೆಯಲ್ಲಿ ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆಯ ಬಗ್ಗೆ ಹಾಗೂ ಬಿಬಿಎಂಪಿ ಆರ್ಥಿಕ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿತ್ತು. ಅನುದಾನ ಕೊರತೆಯ ಕಾರಣಕ್ಕೆ ಟೆಂಡರ್ ರದ್ದುಪಡಿಸಲು ಹಾಗೂಕಾಮಗಾರಿಯನ್ನು ಕೈಬಿಡಲು ಸಮಿತಿ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿತ್ತು. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಪಾಲಿಕೆ ಆಯುಕ್ತರಿಗೆ ನ.18ರಂದು ಪತ್ರ ಬರೆದಿತ್ತು.</p>.<p>ಬಳಿಕ ಮಧ್ಯಪ್ರವೇಶಿಸಿದ್ದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಅವರು ‘ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠದ ಅಗತ್ಯವಿದೆ. ಹಾಗಾಗಿ, ಈ ಪ್ರಸ್ತಾವನೆಯನ್ನು ಮರುಪರಿಶೀಲಿಸಬೇಕು’ ಎಂದು ಡಿ.4ರಂದು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದರು.</p>.<p><strong>ಕೆಂಪೇಗೌಡ ಅಧ್ಯಯನ ಪೀಠಕ್ಕೆ 2017–18ನೇ ಸಾಲಿನ ಪಾಲಿಕೆ ಬಜೆಟ್ನಲ್ಲಿ ₹ 50 ಕೋಟಿ</strong></p>.<p><strong>ಕಾಮಗಾರಿಯ ಡಿಪಿಆರ್ ಮತ್ತು ಅಂದಾಜುಪಟ್ಟಿ ತಯಾರಿಗೆ 2017ರ ಅಕ್ಟೋಬರ್ನಲ್ಲಿ ಕಾರ್ಯಾದೇಶ</strong></p>.<p><strong>ಪೀಠ ಸ್ಥಾಪನೆ ಬಗ್ಗೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮತ್ತು ಬಿಬಿಎಂಪಿ ನಡುವೆ ಒಪ್ಪಂದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.</p>.<p>ಕಾಮಗಾರಿಯನ್ನು ಕಡ್ಡಾಯವಾಗಿ ಬಿಬಿಎಂಪಿ ಅನುದಾನದಲ್ಲೇ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿಯು ಮುಂದಿನ ಸಾಲಿನ ಬಜೆಟ್ನಲ್ಲಿ ಮೀಸಲಿಡಬೇಕು. ಕಾಮಗಾರಿಯನ್ನು ಕೆಟಿಪಿಪಿ ಕಾಯ್ದೆ/ನಿಯಮಗಳಿಗೆ ಅನುಸಾರವಾಗಿಯೇ ಅನುಷ್ಠಾನಗೊಳಿಸಬೇಕು ಎಂದು ಇಲಾಖೆ ಷರತ್ತು ವಿಧಿಸಿದೆ.</p>.<p>ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆಯನ್ನು ಮಾತ್ರ ನೀಡಲಾಗಿದೆ. ಟೆಂಡರ್ಗೆ ಪ್ರತ್ಯೇಕವಾಗಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ಇಲಾಖೆಸ್ಪಷ್ಟಪಡಿಸಿದೆ.</p>.<p>ಬಿಬಿಎಂಪಿ 2017–18ನೇ ಸಾಲಿನ ಬಜೆಟ್ನಲ್ಲಿ ಈ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರಕ್ಕೆ ₹ 50 ಕೋಟಿ ಅನುದಾನ ಮೀಸಲಿಟ್ಟಿತ್ತು. ಈ ಕಾಮಗಾರಿಗೆ ಅನುಮೋದನೆ ನಿರೀಕ್ಷಿಸಿ ಜಾಬ್ ಕೋಡ್ (129–18–000001) ನೀಡಲಾಗಿತ್ತು. ಕಾಮಗಾರಿಯ ವಿಸ್ತೃತ ಯೋಜನಾ ವರದಿ ಅಂದಾಜುಪಟ್ಟಿ ತಯಾರಿಗೆ ರಾಜರಾಜೇಶ್ವರಿನಗರ ಕಾರ್ಯಪಾಲಕ ಎಂಜಿನಿಯರ್ ಅವರು ಎಸಿಎಸ್ ಡಿಸೈನ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2017ರ ಅ.9ರಂದು ಕಾರ್ಯಾದೇಶ ನೀಡಿದ್ದರು.</p>.<p>ಅದರಂತೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮತ್ತು ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರ ನಡುವೆ ಒಪ್ಪಂದ ನಡೆದಿತ್ತು. ಪಾಲಿಕೆಯು 2018–19ನೇ ಸಾಲಿನ ಬಜೆಟ್ನಲ್ಲಿ ಈ ಪೀಠಕ್ಕೆ ₹10 ಲಕ್ಷ ಅನುದಾನವನ್ನು ಮಾತ್ರ ಮೀಸಲಿಟ್ಟಿತ್ತು.</p>.<p>ಪೀಠದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಪಾಲಿಕೆ2019ರ ಮೇ 21ರಂದು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. 2019ರ ನ.04ರಂದು ನಡೆದ ಅಧಿಕಾರಯುಕ್ತ ಸಮಿತಿ ಸಭೆಯಲ್ಲಿ ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆಯ ಬಗ್ಗೆ ಹಾಗೂ ಬಿಬಿಎಂಪಿ ಆರ್ಥಿಕ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿತ್ತು. ಅನುದಾನ ಕೊರತೆಯ ಕಾರಣಕ್ಕೆ ಟೆಂಡರ್ ರದ್ದುಪಡಿಸಲು ಹಾಗೂಕಾಮಗಾರಿಯನ್ನು ಕೈಬಿಡಲು ಸಮಿತಿ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿತ್ತು. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಪಾಲಿಕೆ ಆಯುಕ್ತರಿಗೆ ನ.18ರಂದು ಪತ್ರ ಬರೆದಿತ್ತು.</p>.<p>ಬಳಿಕ ಮಧ್ಯಪ್ರವೇಶಿಸಿದ್ದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಅವರು ‘ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠದ ಅಗತ್ಯವಿದೆ. ಹಾಗಾಗಿ, ಈ ಪ್ರಸ್ತಾವನೆಯನ್ನು ಮರುಪರಿಶೀಲಿಸಬೇಕು’ ಎಂದು ಡಿ.4ರಂದು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದರು.</p>.<p><strong>ಕೆಂಪೇಗೌಡ ಅಧ್ಯಯನ ಪೀಠಕ್ಕೆ 2017–18ನೇ ಸಾಲಿನ ಪಾಲಿಕೆ ಬಜೆಟ್ನಲ್ಲಿ ₹ 50 ಕೋಟಿ</strong></p>.<p><strong>ಕಾಮಗಾರಿಯ ಡಿಪಿಆರ್ ಮತ್ತು ಅಂದಾಜುಪಟ್ಟಿ ತಯಾರಿಗೆ 2017ರ ಅಕ್ಟೋಬರ್ನಲ್ಲಿ ಕಾರ್ಯಾದೇಶ</strong></p>.<p><strong>ಪೀಠ ಸ್ಥಾಪನೆ ಬಗ್ಗೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮತ್ತು ಬಿಬಿಎಂಪಿ ನಡುವೆ ಒಪ್ಪಂದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>