‘ಕಳ್ಳತನ ಪ್ರಕರಣದಲ್ಲಿ ಕೆಲ ದಿನಗಳ ಹಿಂದಷ್ಟೇ ಜೈಲು ಸೇರಿದ್ದ ಶಫಿ, ಸಲೀಂ ಹಾಗೂ ಯಾಸಿರ್ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು. ಮೂವರು ಸೇರಿಯೇ ಕೆಂಗೇರಿ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನವೆಸಗಿದ್ದ ಬಗ್ಗೆ ತಪ್ಪೊಪ್ಪಿಕೊಂಡರು. ಇನ್ನೊಬ್ಬ ಆರೋಪಿ ತನ್ವೀರ್ ಬಗ್ಗೆಯೂ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ಆತನನ್ನೂ ಬಂಧಿಸಲಾಯಿತು’ ಎಂದು ತಿಳಿಸಿದರು.