‘ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ನಿರ್ಣಯ ತೆಗೆದುಕೊಂಡಿದ್ದಾರೆ. ಯಾವ ದೃಷ್ಟಿಯಿಂದ ಹೊಸ ಸ್ಥಾನ ಹಂಚಿಕೆ ಮಾಡಿದ್ದಾರೆ ಎಂಬುದು ಅವರ ವಿವೇಚನೆಗೇ ಬಿಟ್ಟಿದ್ದು. ಅಸಮಾಧಾನಗೊಂಡವರನ್ನು ಅವರೇ ಸಂಬಾಳಿಸಬೇಕು’ ಎಂದು ಅವರು ನಗರದಲ್ಲಿ ಭಾನುವಾರ ಮಾಧ್ಯಮದವರಿಗೆ ತಿಳಿಸಿದರು.