‘6ನೇ ವೇತನ ಶ್ರೇಣಿ ವಿಚಾರವಾಗಿ ಆಡಳಿತಾಧಿಕಾರಿಗಳ ಜತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಹಾಗಾಗಿ ಆಡಳಿತ ಮಂಡಳಿ ಜತೆಗೆ ಇನ್ನೊಂದು ಸುತ್ತಿನ ಮಾತುಕತೆಗೆ ಮುಂದಾಗಿದ್ದೇವೆ. ಆಡಳಿತ ಮಂಡಳಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಭಟನಾ ನಿರತ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.