ಕಿಮೋಥೆರಪಿ ಮತ್ತು ರೇಡಿಯೋಥೆರಪಿ ರೋಗಿಗಳು ನೇರವಾಗಿ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಗೆ, ಗರ್ಭಿಣಿಯರು ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ, ಡಯಾಲಿಸಿಸ್ ಮಾಡಿಸಿಕೊಳ್ಳುವವರು ಡಯಾಲಿಸಿಸ್ ಕೇಂದ್ರಕ್ಕೆ ಬರಬೇಕು. ಮಕ್ಕಳಿಗೆ ಲಸಿಕಾ ಸೌಲಭ್ಯ ಕೂಡಾ 15ರವರೆಗೆ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.