ಈ ಹಿಂದೆ 15 ವರ್ಷ ಕೆಎಂಎಫ್ ಅಧ್ಯಕ್ಷರಾಗಿದ್ದ ರೇವಣ್ಣ, ಮತ್ತೆ ಅದೇ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಇದಕ್ಕಾಗಿ ಈಗಾಗಲೇ ಲಾಬಿ ಆರಂಭಿಸಿದ್ದಾರೆ. ಇದೇ ಉದ್ದೇಶದಿಂದ ಅವರು ಕಾಂಗ್ರೆಸ್ಗೆ ಸೇರಿದ ನಾಲ್ವರು ಕೆಎಂಎಫ್ ನಿರ್ದೇಶಕರನ್ನು ಇತ್ತೀಚೆಗೆ ಹೈದರಾಬಾದಿನ ರೆಸಾರ್ಟ್ಗೆ ಕರೆದುಕೊಂಡು ಹೋಗಿದ್ದರು. ಭೀಮಾ ನಾಯ್ಕ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.