ಬೆಂಗಳೂರು:ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು, ತೀವ್ರ ಲಾಬಿ ನಡೆಸಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದರು.ಹಿಂದೆ ಅವರು ಎರಡು ಬಾರಿ ಅಧ್ಯಕ್ಷರಾಗಿದ್ದರು.
ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
‘ಕೆಎಂಎಫ್ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕೆಎಂಎಫ್ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಾಲು ಉತ್ಪಾದಕ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಲಾಭ ದೊರೆಯಲೆಂದು ಆಶಿಸುತ್ತೇನೆ‘ ಎಂದು ಟ್ವೀಟಿಸಿದ್ದಾರೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ - ಕೆಎಂಎಫ್ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅವರ ನೇತೃತ್ವದಲ್ಲಿ ಕೆಎಂಎಫ್ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಾಲು ಉತ್ಪಾದಕ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಲಾಭ ದೊರೆಯಲೆಂದು ಆಶಿಸುತ್ತೇನೆ. #KMF