ಕೆಲವು ದಿನಗಳಿಂದ ಪಳ್ಳಕ್ಕರೆ ಹಾಗೂ ಗುಹ್ಯ ಗ್ರಾಮಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟದಲ್ಲಿ ಅವು ದಾಂದಲೆ ನಡೆಸುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುತ್ತಿದ್ದರೂ, ಮರಳಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಇದರಿಂದ ಬೆಳೆಗಾರರು ಹಾಗೂ ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ.