ಬಿ.ಕೆ. ಪವಿತ್ರಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾದ ತೀರ್ಪಿನಲ್ಲಿ ತಿಳಿಸಿರುವಂತೆ, ಪರಿಷ್ಕೃತ ಜ್ಯೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂಬ ಆದೇಶ ಪಾಲಿಸಲಾಗಿದೆ. ಎಲ್ಲ ಇಲಾಖೆ, ಮಂಡಳಿ, ನಿಗಮ ಮತ್ತು ಶಾಸನಬದ್ಧ ಸಂಸ್ಥೆಗಳಲ್ಲಿನ ಬಹುತೇಕ ಹುದ್ದೆಗಳ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಿರುವ ಹಿರಿಯ ಅಧಿಕಾರಿಗಳು, ಮುಂಬಡ್ತಿ ಮತ್ತು ಹಿಂಬಡ್ತಿಯ ಆದೇಶ ನೀಡಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸಲ್ಲಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.