ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ ಜಲಾವೃತ, ಜನಜೀವನ ಅಸ್ತವ್ಯಸ್ತ

Last Updated 6 ಆಗಸ್ಟ್ 2019, 3:07 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು‌ ಜನಜೀವನ‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳೂ ಸೇರಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ.

ಭಾಗಮಂಡಲ ಜಲಾವೃತಗೊಂಡಿದೆ. ಈ ವರ್ಷ ಮೊದಲ ಬಾರಿಗೆ ಭಾಗಮಂಡಲದ ಭಗಂಡೇಶ್ವರ ದೇಗುಲದ ಮೆಟ್ಟಿಲು ತನಕ ನೀರು ಬಂದಿದೆ. ನಾಪೋಕ್ಲು- ಅಯ್ಯಂಗೇರಿ- ಭಾಗಮಂಡಲದ ರಸ್ತೆಯ ಮೇಲೆ ಐದು ಐದು ಅಡಿಯಷ್ಟು ನೀರು ಬಂದಿದ್ದು ವಾಹನ ಸಂಚಾರ ಬಂದ್ ಆಗಿದೆ.

ಮಡಿಕೇರಿ,‌ಮಾದಾಪುರ, ಇಗ್ಗೋಡ್ಲು ಹಾಗೂ ಮುಕ್ಕೋಡ್ಲು ಭಾಗದಲ್ಲೂ ಮಳೆ ಆರ್ಭಟಿಸುತ್ತಿದ್ದು ಹಾರಂಗಿ ಒಳಹರಿವು ಏರಿಕೆ ಆಗಿದೆ.

ಇಂದು ರಜೆ ಘೋಷಣೆ:ಕೊಡಗು ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT