<p><strong>ಮಡಿಕೇರಿ:</strong> ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಗುರುವಾರ ಸಾಧಾರಣ ಮಳೆ ಸುರಿದಿದೆ.</p>.<p>ಮೂರು ದಿನಗಳ ಹಿಂದೆ ಸುರಿದಿದ್ದ ಭಾರಿ ಮಳೆಗೆ ಮಣ್ಣು ಸಡಿಲಗೊಂಡು 2ನೇ ಮೊಣ್ಣಂಗೇರಿ ಸಮೀಪದ ಕರ್ತೋಜಿ ಎಂಬಲ್ಲಿ ಬೆಟ್ಟದಿಂದ ಬಂಡೆಗಳು ಉರುಳಿವೆ.</p>.<p>ಈ ಘಟನೆಯು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ದೊಡ್ಡ ಗಾತ್ರದ ಬಂಡೆಗಳು ಕೊಲ್ಲಿ ಪ್ರದೇಶಕ್ಕೆ ಉರುಳಿ ಬಂದಿವೆ.</p>.<p>ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮಣ್ಣು ಸಡಿಲವಾಗಿರುವ ಕಾರಣ ಬಂಡೆ ಉರುಳಿರುವ ಸಾಧ್ಯತೆಯಿದೆ. ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.</p>.<p>ಮಾಂದಲ್ಪಟ್ಟಿ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಮಣ್ಣು ಹಾಗೂ ಕಲ್ಲು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಸದ್ಯಕ್ಕೆ ವಾಹನ ಸಂಚಾರ ಬಂದ್ ಆಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ಭಾಗಮಂಡಲದಲ್ಲಿ 38 ಮಿ.ಮೀ, ಸಂಪಾಜೆಯಲ್ಲಿ 27, ನಾಪೋಕ್ಲು 17, ಮಡಿಕೇರಿ 14 ಮಿ.ಮೀ ಮಳೆಯಾಗಿದೆ. ಮಳೆ ಇಳಿಮುಖವಾಗಿದ್ದು, ಹಾರಂಗಿ ಜಲಾಶಯದ ಒಳಹರಿವು ಮತ್ತೆ ತಗ್ಗಿದೆ.</p>.<p>ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಸೋನೆ ಮಳೆಗೆ ಶಿಥಿಲಗೊಂಡಿದ್ದ ಮನೆಯೊಂದು ಮೈಸೂರಿನ ಗಾಯತ್ರಿಪುರಂನಲ್ಲಿ ಕುಸಿದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಗುರುವಾರ ಸಾಧಾರಣ ಮಳೆ ಸುರಿದಿದೆ.</p>.<p>ಮೂರು ದಿನಗಳ ಹಿಂದೆ ಸುರಿದಿದ್ದ ಭಾರಿ ಮಳೆಗೆ ಮಣ್ಣು ಸಡಿಲಗೊಂಡು 2ನೇ ಮೊಣ್ಣಂಗೇರಿ ಸಮೀಪದ ಕರ್ತೋಜಿ ಎಂಬಲ್ಲಿ ಬೆಟ್ಟದಿಂದ ಬಂಡೆಗಳು ಉರುಳಿವೆ.</p>.<p>ಈ ಘಟನೆಯು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ದೊಡ್ಡ ಗಾತ್ರದ ಬಂಡೆಗಳು ಕೊಲ್ಲಿ ಪ್ರದೇಶಕ್ಕೆ ಉರುಳಿ ಬಂದಿವೆ.</p>.<p>ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮಣ್ಣು ಸಡಿಲವಾಗಿರುವ ಕಾರಣ ಬಂಡೆ ಉರುಳಿರುವ ಸಾಧ್ಯತೆಯಿದೆ. ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.</p>.<p>ಮಾಂದಲ್ಪಟ್ಟಿ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಮಣ್ಣು ಹಾಗೂ ಕಲ್ಲು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಸದ್ಯಕ್ಕೆ ವಾಹನ ಸಂಚಾರ ಬಂದ್ ಆಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ಭಾಗಮಂಡಲದಲ್ಲಿ 38 ಮಿ.ಮೀ, ಸಂಪಾಜೆಯಲ್ಲಿ 27, ನಾಪೋಕ್ಲು 17, ಮಡಿಕೇರಿ 14 ಮಿ.ಮೀ ಮಳೆಯಾಗಿದೆ. ಮಳೆ ಇಳಿಮುಖವಾಗಿದ್ದು, ಹಾರಂಗಿ ಜಲಾಶಯದ ಒಳಹರಿವು ಮತ್ತೆ ತಗ್ಗಿದೆ.</p>.<p>ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಸೋನೆ ಮಳೆಗೆ ಶಿಥಿಲಗೊಂಡಿದ್ದ ಮನೆಯೊಂದು ಮೈಸೂರಿನ ಗಾಯತ್ರಿಪುರಂನಲ್ಲಿ ಕುಸಿದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>