ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ಗಣಪತಿ ದೇವಸ್ಥಾನ ಸಹ ಪ್ರಮುಖ ತೀರ್ಥ ಕ್ಷೇತ್ರವಾಗಿದ್ದು, ಇಲ್ಲಿಗೆ ಬರುವ ಭಕ್ತರ ವಿಶ್ರಾಂತಿಗಾಗಿ ₹ 1 ಕೋಟಿ ಅಂದಾಜು ವೆಚ್ಚದಲ್ಲಿ ಯಾತ್ರಿ ನಿವಾಸ ಕಟ್ಟಡ ನಿರ್ಮಿಸಲಾಗಿದೆ. ಆದರೆ, ನೀರಿನ ಸಮಸ್ಯೆ ಕಾರಣಕ್ಕೆ ಯಾತ್ರಿ ನಿವಾಸ ಕಟ್ಟಡದ ಕೊಠಡಿಗಳನ್ನು ಭಕ್ತರಿಗೆ ಬಾಡಿಗೆಗೆ ಕೊಡುತ್ತಿಲ್ಲ.