<p><strong>ಬೆಂಗಳೂರು:</strong>ಕೇಂದ್ರ ಸರ್ಕಾರದಮಾಜಿಸಚಿವ ದಿವಂಗತ ಕೊಂಡಜ್ಜಿ ಬಸಪ್ಪ ಅವರ ಪುತ್ರ ಕೆ.ಬಿ.ಲಿಂಗರಾಜ್(68) ಅವರು ಬೆಂಗಳೂರಿನ ಮಹಲಕ್ಷ್ಮಿಪುರಂನ ಅವರ ನಿವಾಸದಲ್ಲಿ ಶನಿವಾರ ಬೆಳಗಿನಜಾವ 2.30ಕ್ಕೆ ನಿಧನರಾದರು.</p>.<p>ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದವರಾದ ಲಿಂಗರಾಜ್,ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.</p>.<p>ಅವಿವಾಹಿತರಾಗಿದ್ದ ಅವರು ಸ್ವ ಇಚ್ಛೆಯಿಂದ ದೇಹದಾನ ಮಾಡಿದ್ದರು. ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಕೊಂಡಜ್ಜಿಯಲ್ಲಿ ನೆರವೇರಿಸದೆಅವರ ಆಶಯದಂತೆ ದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ನೀಡಲಾಯಿತು. ಮಧ್ಯಾಹ್ನ 3ರ ವರೆಗೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ದೇಹದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಅವರ ನಿರ್ಧಾರಕ್ಕೆ, ಆಪ್ತರು, ಬಂಧುಗಳು ಅಭಿಮಾನ ವ್ಯಕ್ತಪಡಿಸಿದ್ದಾರೆ.</p>.<p>ಲಿಂಗರಾಜ್ ಅವರು ಕೆಲಕಾಲ ರಾಜಕೀಯದಲ್ಲು, ಬಳಿಕ ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಚಲನಚಿತ್ರ ವಿತರಕರಾಗಿದ್ದರು.</p>.<p>ಮೃತರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ರಾಜ್ಯ ಉಪಾಧ್ಯಕ್ಷರಾದ ಕೊಂಡಜ್ಜಿ ಬ. ಷಣ್ಮುಖಪ್ಪ, ಡಾ.ಗುರುಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಮತ್ತು ದಿವಂಗತ ರಾಜಶೇಖರ್ ಸೆರಿದಂತೆ ಏಳು ಜನ ಸಹೋದರರು. ಒಬ್ಬ ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೇಂದ್ರ ಸರ್ಕಾರದಮಾಜಿಸಚಿವ ದಿವಂಗತ ಕೊಂಡಜ್ಜಿ ಬಸಪ್ಪ ಅವರ ಪುತ್ರ ಕೆ.ಬಿ.ಲಿಂಗರಾಜ್(68) ಅವರು ಬೆಂಗಳೂರಿನ ಮಹಲಕ್ಷ್ಮಿಪುರಂನ ಅವರ ನಿವಾಸದಲ್ಲಿ ಶನಿವಾರ ಬೆಳಗಿನಜಾವ 2.30ಕ್ಕೆ ನಿಧನರಾದರು.</p>.<p>ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದವರಾದ ಲಿಂಗರಾಜ್,ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.</p>.<p>ಅವಿವಾಹಿತರಾಗಿದ್ದ ಅವರು ಸ್ವ ಇಚ್ಛೆಯಿಂದ ದೇಹದಾನ ಮಾಡಿದ್ದರು. ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಕೊಂಡಜ್ಜಿಯಲ್ಲಿ ನೆರವೇರಿಸದೆಅವರ ಆಶಯದಂತೆ ದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ನೀಡಲಾಯಿತು. ಮಧ್ಯಾಹ್ನ 3ರ ವರೆಗೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ದೇಹದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಅವರ ನಿರ್ಧಾರಕ್ಕೆ, ಆಪ್ತರು, ಬಂಧುಗಳು ಅಭಿಮಾನ ವ್ಯಕ್ತಪಡಿಸಿದ್ದಾರೆ.</p>.<p>ಲಿಂಗರಾಜ್ ಅವರು ಕೆಲಕಾಲ ರಾಜಕೀಯದಲ್ಲು, ಬಳಿಕ ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಚಲನಚಿತ್ರ ವಿತರಕರಾಗಿದ್ದರು.</p>.<p>ಮೃತರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ರಾಜ್ಯ ಉಪಾಧ್ಯಕ್ಷರಾದ ಕೊಂಡಜ್ಜಿ ಬ. ಷಣ್ಮುಖಪ್ಪ, ಡಾ.ಗುರುಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಮತ್ತು ದಿವಂಗತ ರಾಜಶೇಖರ್ ಸೆರಿದಂತೆ ಏಳು ಜನ ಸಹೋದರರು. ಒಬ್ಬ ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>