ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮೀನುಗಾರರಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ರಾಜ್ಯದಲ್ಲಿ ಒಳನಾಡು ಮೀನುಗಾರಿಕೆಯನ್ನು ಮೀನುಗಾರಿಕಾ ಸಂಘಗಳು ನಿರ್ವಹಿಸುತ್ತಿವೆ. ಸಂಘದ ಹೆಸರಿನಲ್ಲಿ ಬಲಾಢ್ಯರು ಲಾಭ ಪಡೆಯುತ್ತಿರುವ ದೂರುಗಳು ಕೇಳಿಬಂದ ಕಾರಣದಿಂದ ಸ್ಥಳೀಯ ಮೀನುಗಾರರಿಗೆ ನಿರ್ವಹಣೆಯ ಜವಾಬ್ದಾರಿ ನೀಡಲು
ನಿರ್ಧರಿಸಲಾಗಿದೆ’ ಎಂದರು.