‘ಬಿಜೆಪಿ ಸರ್ಕಾರ ಬಂದ ಮೇಲೆ ಹಿಂದೂ ದೇಗುಲಗಳ ಆದಾಯವನ್ನು ಅಲ್ಪಸಂಖ್ಯಾತರ ಧಾರ್ಮಿಕ ಕೇಂದ್ರಗಳ ಕಾರ್ಯಗಳಿಗೆ ಬಳಸುತ್ತಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ. ಒಂದು ಪೈಸೆಯೂ ಆಚೆಈಚೆ ಆಗುತ್ತಿಲ್ಲ. ಸಾರ್ವಜನಿಕರಲ್ಲಿ ಈ ಸಂಬಂಧ ಗೊಂದಲವಿದ್ದು, ಅದನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಭಾನುವಾರ ನುಡಿದರು. ದೇಗುಲಗಳಲ್ಲಿ ಶೌಚಾಲಯ, ವಸತಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು, ಸಿಬ್ಬಂದಿ ನೇಮಿಸಲು ಆದಾಯದ ಹಣವನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.