ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಹಿರಿಯ‌ ಮುಖಂಡರ ಸಭೆ

Last Updated 11 ಮೇ 2020, 8:34 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಹಿರಿಯ ಮುಖಂಡರ ಸಭೆ ಕರೆದಿದ್ದರು.

ಕೊರೊನಾ ಸೋಂಕು ಹರಡುವಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ನಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT