ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಕೆಪಿಸಿಸಿ ವೈದ್ಯರ ಘಟಕದಿಂದ ಸಹಾಯವಾಣಿ ಆರಂಭ

Last Updated 8 ಏಪ್ರಿಲ್ 2020, 7:23 IST
ಅಕ್ಷರ ಗಾತ್ರ

ಬೆಂಗಳೂರು:ಕೆಪಿಸಿಸಿವೈದ್ಯರ ಘಟಕ ಕೊರೊನಾ ಗೆಲ್ಲೋಣ ಎಂಬ ಧ್ಯೇಯದೊಂದಿಗೆವೈದ್ಯಕೀಯ ಸಹಾಯವಾಣಿಯನ್ನು ಆರಂಭಿಸಿದೆ.

ಮಂಗಳವಾರ ಕೆಪಿಸಿಸಿ, ವೈದ್ಯರು ಮತ್ತು ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಸಲೀಂ ಅಹ್ಮದ್ ಜತೆ ಸಭೆ ನಡೆಸಿದ ನಂತರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಈ ವಿಷಯ ಟ್ವೀಟ್ ಮಾಡಿದ್ದಾರೆ.

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಧರ್ಮವನ್ನು ದೂರುವುದು, ಶಾಂತಿ ಕದಡುವುದಕ್ಕಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರ ಬಗ್ಗೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವೊಂದು ಪ್ರದೇಶಗಳಲ್ಲಿ ಸುಳ್ಳು ಸುದ್ದಿಯಿಂದಾಗಿ ಜನರಿಗೆ ಬಹಿಷ್ಕಾರ ಹಾಕಿದ ಅಥವಾ ಹೊರಗಟ್ಟಿದ ಘಟನೆಗಳು ನಡೆದಿವೆ. ಎಲ್ಲೋ ಒಂದೆರಡು ಕಡೆ ನಡೆದಘಟನೆಗಳಿಗೆ ಇಡೀ ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುತ್ತಿರುವವರ ಮೇಲೆ ಕ್ರಮ ಕೈತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಇದು ಬರೀ ಬಾಯಿ ಮಾತಲ್ಲೇ ಉಳಿಯದಿರಲಿ ಎಂದು ಡಿಕೆಶಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT