ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ ಇಂದು

Last Updated 2 ಜುಲೈ 2020, 5:11 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಕ್ವೀನ್ಸ್‌ ರಸ್ತೆಯಲ್ಲಿರುವ ಪಕ್ಷದ ನೂತನ ಕಟ್ಟಡದಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ, ಕೇರಳ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಹಾಗೂ ರಾಜ್ಯ ನಾಯಕರು ಸೇರಿ 150 ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಬೆಳಿಗ್ಗೆ 10.30ಕ್ಕೆ ಸೇವಾದಳ ಕಾರ್ಯಕರ್ತರ ಗೌರವ ರಕ್ಷೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಪದಗ್ರಹಣಕ್ಕೆ ಮುಖ್ಯಮಂತ್ರಿ ಈಗಾಗಲೇ ಅನುಮತಿ ನೀಡಿದ್ದಾರೆ. ಸುದ್ದಿ ಮಾಧ್ಯಮಗಳು ಹಾಗೂ ಜೂಮ್ ಮೂಲಕ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಕಾರ್ಯಕರ್ತರು ತಾವಿರುವ ಸ್ಥಳಗಳಲ್ಲೇ ಇದ್ದು ವೀಕ್ಷಿಸಬೇಕು. ಆಹ್ವಾನವಿದ್ದವರು ಮಾತ್ರ ಬರಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT