ಬೆಂಗಳೂರು: ಶಾಸಕ ಸ್ಥಾನದಿಂದ ಅನರ್ಹಗೊಂಡ 14 ಮಂದಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ.
ಅಲ್ಲದೆ ಕ್ಷೇತ್ರಗಳವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನೂ ವಜಾ ಮಾಡಿ ಕೆಪಿಸಿಸಿ ಆದೇಶಿಸಿದೆ. ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳದ ಆರೋಪದ ಮೇಲೆ ವಜಾ ಮಾಡಲಾಗಿದೆ ಎಂಬ ಕಾರಣವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ನೀಡಿದ್ದಾರೆ.