‘ಈ ನೇಮಕಾತಿಯಲ್ಲಿ ಕೆಪಿಎಸ್ಸಿಯಿಂದ ಹಲವು ಅಕ್ರಮಗಳು ನಡೆದಿವೆ. ಸಿಐಡಿ ತನಿಖೆಯಲ್ಲಿ ಅಕ್ರಮ ಸಾಬೀತಾದ ಕಾರಣ ಅಕ್ರಮ ಫಲಾನುಭವಿಗಳನ್ನು ಸೇವೆಯಿಂದ ತೆರವುಗೊಳಿಸಬೇಕು, ಇಲ್ಲವೇ ಅವರಿಗೆ ಹಿಂಬಡ್ತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಸಹ ತೀರ್ಪನ್ನು ಪುರಸ್ಕರಿಸಿದೆ. ಹೀಗಿರುವಾಗ ಸುಗ್ರೀವಾಜ್ಜೆ ಮೂಲಕ ಅಕ್ರಮ ಎಸಗಿದವರನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಎನ್.ದೀಪಕ್ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿವರಿಸಿದ್ದಾರೆ. ಅದರ ಪ್ರತಿಯನ್ನು ರಾಷ್ಟ್ರಪತಿಗೂ ಕಳುಹಿಸಿಕೊಟ್ಟಿದ್ದಾರೆ.