'2015ರ ಸಾಲಿನ ನೇಮಕಾತಿಯ ಅಕ್ರಮಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ದೇಶಿಸಬೇಕು ಮತ್ತು ಅಂತಿಮ ಆಯ್ಕೆ ಪಟ್ಟಿಗೆ ತಡೆ ನೀಡಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರವಿಂದ ಕುಮಾರ್ ಹಾಗೂ ಅಶೋಕ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಅಂತೆಯೇ, ‘ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಡಾಟಾ ಹಾಗೂ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳು, ಸಿಸಿಟಿವಿಯಲ್ಲಿ ಸಂಗ್ರಹವಾಗಿರುವ ದೃಶ್ಯಗಳನ್ನು ಮುಂದಿನ ವಿಚಾರಣೆಯವರೆಗೂ ಸಂಗ್ರಹಿಸಿಡಬೇಕು' ಎಂದೂ ನ್ಯಾಯಪೀಠವು ಕೆಪಿಎಸ್ಸಿಗೆ ತಾಕೀತು ಮಾಡಿದೆ.