<p><strong>ಬೆಂಗಳೂರು:</strong> ‘ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕಾಯಂ ಆದ 417 ಸಹಾಯಕ ಮತ್ತು ಕಿರಿಯ ಎಂಜಿನಿಯರ್ಗಳಿಗೆ ನೀಡಲಾಗಿರುವ ಕೃಪಾಂಕ ಪ್ರಮಾಣವನ್ನು 30ರಿಂದ 15ಕ್ಕೆ ಇಳಿಸಿ ಹೊಸ ಪಟ್ಟಿ ಪ್ರಕಟಿಸಬೇಕು’ ಎಂಬ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ನಗರದ ಬಿ.ಕುಮಾರಸ್ವಾಮಿ ಸೇರಿದಂತೆ 18 ಜನರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಗುತ್ತಿಗೆ ಆಧಾರದಲ್ಲಿ 1993–94ರಲ್ಲಿ ಐದು ಜಿಲ್ಲೆಗಳಿಂದ ಒಟ್ಟು 370 ಜನ ಸಹಾಯಕ ಮತ್ತು ಕಿರಿಯ ಅಭಿಂತರರರು ನೇಮಕ ಮಾಡಿಕೊಳ್ಳಲಾಗಿತ್ತು. ಮುಂದುವರಿದು 1998ರಲ್ಲಿ ಈ ಪಟ್ಟಿಗೆ 43 ಜನರನ್ನು ಹಂಗಾಮಿಯಾಗಿ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಗುತ್ತಿಗೆ ಮತ್ತು ಹಂಗಾಮಿ ಆಧಾರದಲ್ಲಿ ಕಾರ್ಯ ನಿರ್ವಹಿಸಿದ್ದ ಒಟ್ಟು 417 ಜನರನ್ನು 2002ರಲ್ಲಿ ನೇರವಾಗಿ ಕಾಯಂ ಮಾಡಲಾಗಿತ್ತು.</p>.<p>ಈ ನೇರ ಕಾಯಮಾತಿಯನ್ನು ನಿರುದ್ಯೋಗಿ ಎಂಜಿನಿಯರ್ಗಳು ಕೆಎಟಿಯಲ್ಲಿ ಪ್ರಶ್ನಿಸಿದ್ದರು. ಕೆಎಟಿ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ನಿರುದ್ಯೋಗಿ ಎಂಜಿನಿಯರ್ಗಳು ಈ ಆದೇಶವನ್ನು ಹೈಕೋರ್ಟ್ನಲ್ಲಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ 2012ರಲ್ಲಿ ಈ ನೇರ ಕಾಯಮಾತಿಯನ್ನು ರದ್ದುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕಾಯಂ ಆದ 417 ಸಹಾಯಕ ಮತ್ತು ಕಿರಿಯ ಎಂಜಿನಿಯರ್ಗಳಿಗೆ ನೀಡಲಾಗಿರುವ ಕೃಪಾಂಕ ಪ್ರಮಾಣವನ್ನು 30ರಿಂದ 15ಕ್ಕೆ ಇಳಿಸಿ ಹೊಸ ಪಟ್ಟಿ ಪ್ರಕಟಿಸಬೇಕು’ ಎಂಬ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ನಗರದ ಬಿ.ಕುಮಾರಸ್ವಾಮಿ ಸೇರಿದಂತೆ 18 ಜನರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಗುತ್ತಿಗೆ ಆಧಾರದಲ್ಲಿ 1993–94ರಲ್ಲಿ ಐದು ಜಿಲ್ಲೆಗಳಿಂದ ಒಟ್ಟು 370 ಜನ ಸಹಾಯಕ ಮತ್ತು ಕಿರಿಯ ಅಭಿಂತರರರು ನೇಮಕ ಮಾಡಿಕೊಳ್ಳಲಾಗಿತ್ತು. ಮುಂದುವರಿದು 1998ರಲ್ಲಿ ಈ ಪಟ್ಟಿಗೆ 43 ಜನರನ್ನು ಹಂಗಾಮಿಯಾಗಿ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಗುತ್ತಿಗೆ ಮತ್ತು ಹಂಗಾಮಿ ಆಧಾರದಲ್ಲಿ ಕಾರ್ಯ ನಿರ್ವಹಿಸಿದ್ದ ಒಟ್ಟು 417 ಜನರನ್ನು 2002ರಲ್ಲಿ ನೇರವಾಗಿ ಕಾಯಂ ಮಾಡಲಾಗಿತ್ತು.</p>.<p>ಈ ನೇರ ಕಾಯಮಾತಿಯನ್ನು ನಿರುದ್ಯೋಗಿ ಎಂಜಿನಿಯರ್ಗಳು ಕೆಎಟಿಯಲ್ಲಿ ಪ್ರಶ್ನಿಸಿದ್ದರು. ಕೆಎಟಿ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ನಿರುದ್ಯೋಗಿ ಎಂಜಿನಿಯರ್ಗಳು ಈ ಆದೇಶವನ್ನು ಹೈಕೋರ್ಟ್ನಲ್ಲಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ 2012ರಲ್ಲಿ ಈ ನೇರ ಕಾಯಮಾತಿಯನ್ನು ರದ್ದುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>