ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಫಲಿತಾಂಶ ಪ್ರಕಟವಾಗಿದ್ದು, ಅಕ್ರಮ ನಡೆದಿದ್ದರೆ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ತಪ್ಪು ಮಾಡಿದ್ದರೆ ಪರೀಕ್ಷಾ ಪ್ರಾಧಿಕಾರವನ್ನೇ ಮುಚ್ಚಿಸಲಿ. ಅದು ಬಿಟ್ಟು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕೊನೆ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿದ್ದರಿಂದ ಪರೀಕ್ಷೆ ಬರೆದಿದ್ದ 64 ಸಾವಿರ ಅಭ್ಯರ್ಥಿಗಳು ಪರಿತಪಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.