ಉತ್ತರ ಪತ್ರಿಕೆಗಳ ಪ್ರತಿ ನೀಡಲು ನಿರಾಕರಿಸಿದ್ದ ಕೆಪಿಸಿಸ್ ವಿರುದ್ಧ ಗರಂ ಆಗಿದ್ದ ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಅವರು, ‘ಕೆಪಿಎಸ್ಸಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದು, ಈ ನಡೆ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತೊಬ್ಬ ಆಯುಕ್ತ ಕೆ.ಇ.ಕುಮಾರಸ್ವಾಮಿ ಅವರು ಕೆಪಿಎಸ್ಸಿ ನಡೆ ತಿದ್ದಿಕೊಳ್ಳಲು ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು.