<p><strong>ಬೆಂಗಳೂರು:</strong> 2015ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು’ ಎಂದು ಹೇಳಿದ್ದಾರೆ.</p>.<p>ಅಂಗೇಶ್ಕುಮಾರ್ ಎಂಬುವರು ಯುಪಿಎಸ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆ ಕೇಳಿದ್ದ ಪ್ರಕರಣದ ಸುಪ್ರೀಂ ಕೋರ್ಟ್ ಆದೇಶವನ್ನೇ ಮುಂದಿಟ್ಟುಕೊಂಡು ಕೆಪಿಎಸ್ಸಿ ಹಿಂಬರಹ ನೀಡುತ್ತಿದೆ. ಆ ನಂತರ ಅದೇ ಸುಪ್ರೀಂ ಕೋರ್ಟ್ ಮೃದುಲಾ ಮಿಶ್ರ ಪ್ರಕರಣದಲ್ಲಿ ಉತ್ತರ ಪತ್ರಿಕೆಗಳ ಪ್ರತಿ ನೀಡಬೇಕು ಎಂದು ಆದೇಶಿಸಿದೆ.</p>.<p>‘ಉತ್ತರ ಪತ್ರಿಕೆ ಪ್ರತಿ ನೀಡಲೇಬೇಕು ಎಂದು ಕರ್ನಾಟಕ ಮಾಹಿತಿ ಆಯೋಗ ಕೂಡ ಆದೇಶಗಳನ್ನು ನೀಡುತ್ತಿದೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದೂ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಆದರೂ, ಅಭ್ಯರ್ಥಿಗಳನ್ನು ಕೆಪಿಎಸ್ಸಿ ಅಲೆದಾಡಿಸಲಾಗುತ್ತಿದೆ’ಎಂದು ವಿವರಿಸಿದ್ದಾರೆ.</p>.<p>‘ನನ್ನನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿರುವ ಅಭ್ಯರ್ಥಿಗಳು, ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಮತ್ತು ಮಾಹಿತಿ ಹಕ್ಕು ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಆದೇಶ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಉತ್ತರ ಪತ್ರಿಕೆಗಳ ಪ್ರತಿ ನೀಡಲು ನಿರಾಕರಿಸಿದ್ದ ಕೆಪಿಸಿಸ್ ವಿರುದ್ಧ ಗರಂ ಆಗಿದ್ದ ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಅವರು, ‘ಕೆಪಿಎಸ್ಸಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದು, ಈ ನಡೆ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತೊಬ್ಬ ಆಯುಕ್ತ ಕೆ.ಇ.ಕುಮಾರಸ್ವಾಮಿ ಅವರು ಕೆಪಿಎಸ್ಸಿ ನಡೆ ತಿದ್ದಿಕೊಳ್ಳಲು ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು.</p>.<p class="Briefhead"><strong>ಐಎಎಸ್ ಅಧಿಕಾರಿಗೆ ಶೋಕಾಸ್ ನೋಟಿಸ್</strong></p>.<p>ಉತ್ತರ ಪತ್ರಿಕೆಗಳ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕಿ(ಐಎಎಸ್ ಅಧಿಕಾರಿ) ದಿವ್ಯಪ್ರಭು ಅವರಿಗೆ ಮಾಹಿತಿ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>‘ಮಾಹಿತಿ ಹಕ್ಕು ಕಾಯ್ದೆ ಅನುಷ್ಠಾನಗೊಳಿಸಲು ವಿಫಲವಾಗುತ್ತಿರುವ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ(ಡಿಒಪಿಟಿ) ಶಿಫಾರಸು ಮಾಡಲಾಗುವುದು’ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 2015ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು’ ಎಂದು ಹೇಳಿದ್ದಾರೆ.</p>.<p>ಅಂಗೇಶ್ಕುಮಾರ್ ಎಂಬುವರು ಯುಪಿಎಸ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆ ಕೇಳಿದ್ದ ಪ್ರಕರಣದ ಸುಪ್ರೀಂ ಕೋರ್ಟ್ ಆದೇಶವನ್ನೇ ಮುಂದಿಟ್ಟುಕೊಂಡು ಕೆಪಿಎಸ್ಸಿ ಹಿಂಬರಹ ನೀಡುತ್ತಿದೆ. ಆ ನಂತರ ಅದೇ ಸುಪ್ರೀಂ ಕೋರ್ಟ್ ಮೃದುಲಾ ಮಿಶ್ರ ಪ್ರಕರಣದಲ್ಲಿ ಉತ್ತರ ಪತ್ರಿಕೆಗಳ ಪ್ರತಿ ನೀಡಬೇಕು ಎಂದು ಆದೇಶಿಸಿದೆ.</p>.<p>‘ಉತ್ತರ ಪತ್ರಿಕೆ ಪ್ರತಿ ನೀಡಲೇಬೇಕು ಎಂದು ಕರ್ನಾಟಕ ಮಾಹಿತಿ ಆಯೋಗ ಕೂಡ ಆದೇಶಗಳನ್ನು ನೀಡುತ್ತಿದೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದೂ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಆದರೂ, ಅಭ್ಯರ್ಥಿಗಳನ್ನು ಕೆಪಿಎಸ್ಸಿ ಅಲೆದಾಡಿಸಲಾಗುತ್ತಿದೆ’ಎಂದು ವಿವರಿಸಿದ್ದಾರೆ.</p>.<p>‘ನನ್ನನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿರುವ ಅಭ್ಯರ್ಥಿಗಳು, ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಮತ್ತು ಮಾಹಿತಿ ಹಕ್ಕು ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಆದೇಶ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಉತ್ತರ ಪತ್ರಿಕೆಗಳ ಪ್ರತಿ ನೀಡಲು ನಿರಾಕರಿಸಿದ್ದ ಕೆಪಿಸಿಸ್ ವಿರುದ್ಧ ಗರಂ ಆಗಿದ್ದ ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಅವರು, ‘ಕೆಪಿಎಸ್ಸಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದು, ಈ ನಡೆ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತೊಬ್ಬ ಆಯುಕ್ತ ಕೆ.ಇ.ಕುಮಾರಸ್ವಾಮಿ ಅವರು ಕೆಪಿಎಸ್ಸಿ ನಡೆ ತಿದ್ದಿಕೊಳ್ಳಲು ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು.</p>.<p class="Briefhead"><strong>ಐಎಎಸ್ ಅಧಿಕಾರಿಗೆ ಶೋಕಾಸ್ ನೋಟಿಸ್</strong></p>.<p>ಉತ್ತರ ಪತ್ರಿಕೆಗಳ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕಿ(ಐಎಎಸ್ ಅಧಿಕಾರಿ) ದಿವ್ಯಪ್ರಭು ಅವರಿಗೆ ಮಾಹಿತಿ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>‘ಮಾಹಿತಿ ಹಕ್ಕು ಕಾಯ್ದೆ ಅನುಷ್ಠಾನಗೊಳಿಸಲು ವಿಫಲವಾಗುತ್ತಿರುವ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ(ಡಿಒಪಿಟಿ) ಶಿಫಾರಸು ಮಾಡಲಾಗುವುದು’ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>