‘ಇಲ್ಲಿ ಡಯಾಲಿಸಿಸ್ ಕೇಂದ್ರ ನಡೆಸುತ್ತಿರುವ ಬಿ.ಆರ್.ಶೆಟ್ಟಿ ಕಂಪನಿಯೇ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಡಯಾಲಿಸಿಸ್ ನಡೆಸುತ್ತಿದೆ. ಒಂದು ವೇಳೆ ಸೋಂಕು ತಗುಲಿರುವುದು ದೃಢಪಟ್ಟರೆ, ಸೋಂಕು ತಗುಲಿರಬಹುದಾದ ಸಾಧ್ಯತೆಗಳನ್ನು ಪತ್ತೆ ಹಚ್ಚಲು ತಜ್ಞರನ್ನು ಕರೆಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.