‘ಸೆ. 21ರಿಂದ 24ರವರೆಗೆ ಮೇಳ ನಡೆಸಲು ಈ ಮೊದಲು ತೀರ್ಮಾನಿಸಲಾಗಿತ್ತು. ಆದರೆಉತ್ತರ ಕರ್ನಾಟಕ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪರ, ಉತ್ತರ ಕನ್ನಡ, ಗದಗ ಜಿಲ್ಲೆಯಲ್ಲಿ ಉಂಟಾದ ನೆರೆ ಪರಿಸ್ಥಿತಿಯಿಂದ ಸಾಕಷ್ಟು ಹಾನಿಯಾಗಿದೆ. ರೈತರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಹೀಗಾಗಿ ಹಿಂಗಾರು ಹಂಗಾಮಿಗೆ ಅನುಕೂಲವಾಗುವಂತೆ ತಂತ್ರಜ್ಞಾನವನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು’ ಎಂದರು.