ವಿಧಾನಸಭೆಯಲ್ಲಿ ಸೋಮವಾರ ವಿಶ್ವಾಸಮತ ಪ್ರಸ್ತಾವ ಮಂಡನೆಯ ಚರ್ಚೆ ವೇಳೆ ಮಾತನಾಡಿ, ‘ಬಿಜೆಪಿಯ ಗುರಿ ಕಾಂಗ್ರೆಸ್ ಮುಕ್ತ ಭಾರತ ಅಲ್ಲ, ವಿರೋಧ ಪಕ್ಷ ಮುಕ್ತ ಭಾರತ. ಕರ್ನಾಟಕ, ಗುಜರಾತ್, ಗೋವಾ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳ ಹಲವು ನಾಯಕರನ್ನು ಸೆಳೆದಿದ್ದಾರೆ. ಈ ಪ್ರಯತ್ನ ಇನ್ನೂ ಮುಂದುವರಿದಿದೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಮೂಲಕ ರಷ್ಯಾದಲ್ಲಿ ಜಾರಿಯಲ್ಲಿರುವಂತಹ ವ್ಯವಸ್ಥೆ ಜಾರಿಗೆ ಪ್ರಯತ್ನ ನಡೆಸಿದ್ದಾರೆ’ ಎಂದು ಆರೋಪಿಸಿದರು.