<p><strong>ರಾಯಚೂರು:</strong>ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನಿರಂತರವಾಗಿ ನೀರು ಹೊರಬಿಡಲಾಗುತ್ತಿದ್ದು, ಗುರುವಾರ 1.97 ಲಕ್ಷ ಕ್ಯುಸೆಕ್ ಹೊರಹರಿವು ಪ್ರಮಾಣವಿತ್ತು. ಲಿಂಗಸುಗೂರು ತಾಲ್ಲೂಕಿನ ಕೃಷ್ಣಾ ನದಿ ತೀರ ಪ್ರದೇಶಗಳಲ್ಲಿ ಅಧಿಕಾರಿಗಳು ನಿಗಾ ವಹಿಸಿದ್ದಾರೆ.</p>.<p>ಕಡದರಗಡ್ಡಿ, ಶೀಲಹಳ್ಳಿ, ತವಗ ಸೇರಿದಂತೆ ನಡುಗಡ್ಡೆ ಪ್ರದೇಶಗಳಲ್ಲಿ ವಾಸವಿರುವ ಜನರು ನದಿಗೆ ಇಳಿಯದಂತೆ ಮತ್ತು ಜಾನುವಾರುಗಳನ್ನು ತೆಗೆದುಕೊಂಡು ನದಿಗೆ ತೆರಳದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿರುವ ಕಾರಣ ನದಿಪ್ರವಾಹ ಹೆಚ್ಚಾಗಲಿದೆ. ಯಾವುದೇ ಕಾರಣಕ್ಕೂ ನದಿ ತೀರಕ್ಕೆ ಹೋಗಬಾರದು ಎಂದು ಜನರಿಗೆ ತಿಳಿಸಿದ್ದಾರೆ.</p>.<p><strong>ಕಲಬುರ್ಗಿ, ಬೀದರ್ನಲ್ಲಿ ಮಳೆ:</strong>ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಯಿತು. ಕಲಬುರ್ಗಿ ನಗರದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಆರಂಭವಾದ ಮಳೆ ರಾತ್ರಿಯವರೆಗೆ ಮುಂದುವರೆಯಿತು.</p>.<p>ಕಲಬುರ್ಗಿ ಜಿಲ್ಲೆಯ ಚಿತ್ತಾಪುರ, ಕಾಳಗಿ, ಚಿಂಚೋಳಿ ಮತ್ತು ಸೇಡಂನಲ್ಲಿ ಸಾಧಾರಣ ಮಳೆಯಾಯಿತು. ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್ನಲ್ಲೂ ಮಳೆಯಾಯಿತು.</p>.<p><strong>ಶಿವಮೊಗ್ಗದಲ್ಲಿ ಸಾಧಾರಣ ಮಳೆ:</strong>ಜಿಲ್ಲೆಯ ಹಲವೆಡೆ ಗುರುವಾರ ಸಾಧಾರಣ ಮಳೆಯಾಗಿದೆ.ಶಿವಮೊಗ್ಗ, ಭದ್ರಾವತಿ ಭಾಗದಲ್ಲಿ ಬಿಸಿಲಿನ ವಾತಾವರಣವಿದ್ದು, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ, ಮಾಸ್ತಿಕಟ್ಟೆ, ರಿಪ್ಪನ್ಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಸೊರಬದಲ್ಲಿ ತುಂತುರು ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕ್ಷೀಣಿಸಿರುವುದರಿಂದ ಲಿಂಗನಮಕ್ಕಿ, ಭದ್ರಾ, ತುಂಗಾ, ಚಕ್ರಾ, ಸಾವೇಹಕ್ಲು, ಮಾಣಿ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನಿರಂತರವಾಗಿ ನೀರು ಹೊರಬಿಡಲಾಗುತ್ತಿದ್ದು, ಗುರುವಾರ 1.97 ಲಕ್ಷ ಕ್ಯುಸೆಕ್ ಹೊರಹರಿವು ಪ್ರಮಾಣವಿತ್ತು. ಲಿಂಗಸುಗೂರು ತಾಲ್ಲೂಕಿನ ಕೃಷ್ಣಾ ನದಿ ತೀರ ಪ್ರದೇಶಗಳಲ್ಲಿ ಅಧಿಕಾರಿಗಳು ನಿಗಾ ವಹಿಸಿದ್ದಾರೆ.</p>.<p>ಕಡದರಗಡ್ಡಿ, ಶೀಲಹಳ್ಳಿ, ತವಗ ಸೇರಿದಂತೆ ನಡುಗಡ್ಡೆ ಪ್ರದೇಶಗಳಲ್ಲಿ ವಾಸವಿರುವ ಜನರು ನದಿಗೆ ಇಳಿಯದಂತೆ ಮತ್ತು ಜಾನುವಾರುಗಳನ್ನು ತೆಗೆದುಕೊಂಡು ನದಿಗೆ ತೆರಳದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿರುವ ಕಾರಣ ನದಿಪ್ರವಾಹ ಹೆಚ್ಚಾಗಲಿದೆ. ಯಾವುದೇ ಕಾರಣಕ್ಕೂ ನದಿ ತೀರಕ್ಕೆ ಹೋಗಬಾರದು ಎಂದು ಜನರಿಗೆ ತಿಳಿಸಿದ್ದಾರೆ.</p>.<p><strong>ಕಲಬುರ್ಗಿ, ಬೀದರ್ನಲ್ಲಿ ಮಳೆ:</strong>ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಯಿತು. ಕಲಬುರ್ಗಿ ನಗರದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಆರಂಭವಾದ ಮಳೆ ರಾತ್ರಿಯವರೆಗೆ ಮುಂದುವರೆಯಿತು.</p>.<p>ಕಲಬುರ್ಗಿ ಜಿಲ್ಲೆಯ ಚಿತ್ತಾಪುರ, ಕಾಳಗಿ, ಚಿಂಚೋಳಿ ಮತ್ತು ಸೇಡಂನಲ್ಲಿ ಸಾಧಾರಣ ಮಳೆಯಾಯಿತು. ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್ನಲ್ಲೂ ಮಳೆಯಾಯಿತು.</p>.<p><strong>ಶಿವಮೊಗ್ಗದಲ್ಲಿ ಸಾಧಾರಣ ಮಳೆ:</strong>ಜಿಲ್ಲೆಯ ಹಲವೆಡೆ ಗುರುವಾರ ಸಾಧಾರಣ ಮಳೆಯಾಗಿದೆ.ಶಿವಮೊಗ್ಗ, ಭದ್ರಾವತಿ ಭಾಗದಲ್ಲಿ ಬಿಸಿಲಿನ ವಾತಾವರಣವಿದ್ದು, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ, ಮಾಸ್ತಿಕಟ್ಟೆ, ರಿಪ್ಪನ್ಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಸೊರಬದಲ್ಲಿ ತುಂತುರು ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕ್ಷೀಣಿಸಿರುವುದರಿಂದ ಲಿಂಗನಮಕ್ಕಿ, ಭದ್ರಾ, ತುಂಗಾ, ಚಕ್ರಾ, ಸಾವೇಹಕ್ಲು, ಮಾಣಿ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>