ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತನಿಖಾ ದಳವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳಲಿದೆ. ಈ ಪ್ರಕರಣವನ್ನು ಎಸ್ಐಟಿಗೆ ಕೊಡಲು ಕುತಂತ್ರಿ ರಾಜಕಾರಣಿಯಾದ ಸಿದ್ದರಾಮಯ್ಯ ಕಾರಣ. ಈ ಮೂಲಕ ಬಿಜೆಪಿ ಜತೆಗೆ ಜೆಡಿಎಸ್ ಅನ್ನು ಮುಗಿಸಲು ಸಂಚು ನಡೆಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದಕ್ಕೆ ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.