ಶಿವಮೊಗ್ಗ:ಅನರ್ಹ ಶಾಸಕರ ಕುರಿತು ಬಿಜೆಪಿ ಮುಖಂಡರ ಹೇಳಿಕೆಗಳಿಗೆ ಸಚಿವ ಈಶ್ವರಪ್ಪ ಗರಂ ಆಗಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ. ರೇಣುಕಾಚಾರ್ಯ, ಲಕ್ಷ್ಮಣ ಸವದಿ ಹೇಳಿಕೆ ಸರಿಯಲ್ಲ. ಅದು ಪಕ್ಷದ ಅಧ್ಯಕ್ಷರಿಗೆ ಬಿಟ್ಟ ವಿಚಾರ. ಅನರ್ಹ ಶಾಸಕರ ಕುರಿತು ಚರ್ಚೆ ಅನಗತ್ಯ’ ಎಂದರು.