ನಗರದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟಕಗಳು ಎಷ್ಟಿವೆ? ಎಲ್ಲೆಲ್ಲಿವೆ? ಹೇಗೆ ಕಾರ್ಯನಿರ್ವಹಿಸುತ್ತಿವೆ? ಯಾವ ಏಜೆನ್ಸಿ ನಿರ್ವಹಿಸುತ್ತಿದೆ? ಶುದ್ಧ ನೀರು ಜನರಿಗೆ ಸಿಗುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳ ತಂಡ ಪರಿಶೀಲಿಸಲಿದೆ. ಪರಿಶೀಲನೆಯ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಫೋಟೊ ಸಹ ಪಡೆಯುವಂತೆ ತಿಳಿಸಲಾಗಿದೆ. ಸಮಗ್ರ ವರದಿಯ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದರು.