ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.
ನೆರೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ತೆರಳುವ ಮುನ್ನ ನಗರದಲ್ಲಿ ಶನಿವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು ಉಸ್ತುವಾರಿ ಸಚಿವರ ನೇಮಕದ ವಿಷಯ ಪ್ರಕಟಿಸಿದರು. ಈ ವೇಳೆ ಈಶ್ವರಪ್ಪ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರೂ ಇದ್ದರು.
ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮದ್ದೂರಿನ ಶಾಸಕ ಡಿ.ಸಿ. ತಮ್ಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು.