‘ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುವಾಗ ಒಳಗೊಳಗೇ ಬಡಿದಾಡುತ್ತಿದ್ದರು. ಈಗ ಬೀದಿಗೆ ಬಿದ್ದಿದ್ದಾರೆ. ಆಗಿನ ಕೆಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ನಾವು ಹೇಳಿದ್ದಲ್ಲ, ಅವತ್ತಿನ ಮುಖ್ಯಮಂತ್ರಿ ಕುಮಾರಸ್ವಾಮಿಯೇ ಹೇಳಿದ್ದಾರೆ. ಇಂಥವರೊಡನೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕೆಲವು ಶಾಸಕರು ಸರ್ಕಾರದಿಂದ ಹೊರಬಂದಿದ್ದರು’ ಎಂದು ಶಾಸಕರ ನಡೆಯನ್ನು ಸಮರ್ಥಿಸಿಕೊಂಡರು.