ಅವರ ಸೇವಾವಧಿಯನ್ನು ಮೂರು ತಿಂಗಳು ವಿಸ್ತರಿಸಲು ನಿರ್ಣಯ ಕೈಗೊಂಡಿದ್ದ ರಾಜ್ಯ ಸಚಿವ ಸಂಪುಟ ಸಭೆ, ಈ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸುವಂತೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ಪ್ರಸ್ತಾವನೆ ಕಳುಹಿಸಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಮುಖ್ಯಕಾರ್ಯದರ್ಶಿಯನ್ನು ಬದಲಾವಣೆ ಮಾಡುವುದು ಸಮಂಜಸವಾಗುವುದಿಲ್ಲ ಎಂದೂ ಸರ್ಕಾರ ಪ್ರತಿಪಾದಿಸಿತ್ತು.