ಬೆಂಗಳೂರು: ಕೆಎಸ್ಆರ್ಟಿಸಿ ನೌಕರರಿಗೆ ನೀಡುತ್ತಿದ್ದ ಗೃಹ ಸಾಲದ ಮೇಲಿನ ಶೇ 4ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
‘ಕೊರೊನಾ ಸೋಂಕು ಹರಡು ತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಲ್ಲದೇ ಸಂಸ್ಥೆ ನಷ್ಟದಲ್ಲಿದೆ. ಆರ್ಥಿಕವಾಗಿ ಸಂಸ್ಥೆ ಪುನಶ್ಚೇತನಗೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸಂಸ್ಥೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.