ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಬಸ್ ಡಿಪೊ, ವಿಭಾಗೀಯ ಕಾರ್ಯಾಗಾರ, ತರಬೇತಿ ಕೇಂದ್ರಗಳ ಸಿಬ್ಬಂದಿ ಕೆಲಸ ಮಾಡುವ ಸ್ಥಳದಲ್ಲಿ ಉಗುಳಿದರೆ ₹200 ದಂಡ ವಿಧಿಸಲಾಗುವುದು ಎಂದು ಸಂಸ್ಥೆ ಎಚ್ಚರಿಸಿದೆ.
‘ಎಲ್ಲೆಂದರಲ್ಲಿ ಉಗುಳುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವ ಕಾರಣ ಈ ಎಲ್ಲಾ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಸಾರ್ವಜನಿಕರು ಉಗುಳಿದರೆ ₹100 ದಂಡ ವಿಧಿಸಲಾಗುತ್ತದೆ’ ಎಂದುಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.