<p><strong>ಬೆಂಗಳೂರು</strong>: ಲಾಕ್ಡೌನ್ ಸಡಿಲಗೊಳಿಸಿದ ನಂತರವೂ ಬಸ್ ಪ್ರಯಾಣಿಕರ ಸಂಖ್ಯೆ ಏರಿಕೆಯಾಗದ ಕಾರಣ ಚಾಲಕ ಮತ್ತು ನಿರ್ವಾಹಕರನ್ನು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.</p>.<p>ನಿಗಮದ 8,200 ಬಸ್ಗಳ ಪೈಕಿ 3,500 ಬಸ್ಗಳು ಮಾತ್ರ ಕಾರ್ಯಾಚರಣೆಯಲ್ಲಿವೆ. ಶೇ 40ರಷ್ಟು ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ನಿಗಮಕ್ಕೆ ಕಷ್ಟವಾಗಿದೆ.</p>.<p>ಚಾಲಕ ಮತ್ತು ನಿರ್ವಾಹಕರು ಘಟಕದಲ್ಲಿ ಕುಳಿತುಕೊಳ್ಳುವ ಬದಲು ರೊಟೋಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡುವಂತೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶಿಸಿದ್ದಾರೆ.</p>.<p>‘ಬಸ್ಗಳ ಕಾರ್ಯಾಚರಣೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಸಿಬ್ಬಂದಿಯನ್ನಷ್ಟೇ ಕರ್ತವ್ಯಕ್ಕೆ ನೇಮಿಸಿ ಉಳಿದವರಿಗೆ ರಜೆ ನೀಡಬೇಕು. ಘಟಕಗಳಲ್ಲಿ ಹೆಚ್ಚುವರಿಯಾಗಿ 5 ಸಿಬ್ಬಂದಿಯನ್ನು ಮಾತ್ರ ನಿಯೋಜಿಸಿಕೊಳ್ಳಬೇಕು. 55 ವರ್ಷ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಆದ್ಯತೆ ಮೇರೆಗೆ ರಜೆ ನೀಡಬೇಕು’ ಎಂದು ಸೂಚನೆ ನೀಡಿದ್ದಾರೆ.</p>.<p><strong>ಸಂಬಳ ಕಡಿತ ಇಲ್ಲ</strong></p>.<p>‘ರೊಟೇಷನ್ ಆಧಾರದಲ್ಲಿ ಕೆಲಸಕ್ಕೆ ನಿಯೋಜನೆಗೊಂಡರೂ ಸಿಬ್ಬಂದಿಯ ಸಂಬಳ ಕಡಿತ ಆಗುವುದಿಲ್ಲ. ಎಲ್ಲರಿಗೂ ಸಮಾನವಾಗಿ ಕೆಲಸ ಸಿಗುವಂತೆ ನೋಡಿಕೊಳ್ಳಲಾಗುವುದು. ಅಲ್ಲದೇ ಪೂರ್ಣ ಪ್ರಮಾಣದ ಸಂಬಳ ನೀಡಲಾಗುವುದು’ ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸದ್ಯ ನಿಗಮಕ್ಕೆ ಬರುತ್ತಿರುವ ಆದಾಯ ಡೀಸೆಲ್ ವೆಚ್ಚಕ್ಕೂ ಸಾಕಾಗುತ್ತಿಲ್ಲ. 30 ಸೀಟುಗಳ ಮಿತಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಆದರೂ, ಪ್ರಯಾಣಿಕರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದರು.</p>.<p><strong>ಇಂದಿನಿಂದ ಎ.ಸಿ ಬಸ್ಗಳ ಸಂಚಾರ</strong></p>.<p>ಹವಾ ನಿಯಂತ್ರಿತ (ಎ.ಸಿ) ಬಸ್ಗಳ ಕಾರ್ಯಾಚರಣೆಯನ್ನು ಗುರುವಾರದಿಂದ (ಜೂ.25) ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಎ.ಸಿ ಬಸ್ಗಳು ಸಂಚರಿಸಲಿವೆ.</p>.<p>‘ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾತ್ರಿ ಪ್ರಯಾಣದಲ್ಲಿ ಹೊದಿಕೆ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಾಕ್ಡೌನ್ ಸಡಿಲಗೊಳಿಸಿದ ನಂತರವೂ ಬಸ್ ಪ್ರಯಾಣಿಕರ ಸಂಖ್ಯೆ ಏರಿಕೆಯಾಗದ ಕಾರಣ ಚಾಲಕ ಮತ್ತು ನಿರ್ವಾಹಕರನ್ನು ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.</p>.<p>ನಿಗಮದ 8,200 ಬಸ್ಗಳ ಪೈಕಿ 3,500 ಬಸ್ಗಳು ಮಾತ್ರ ಕಾರ್ಯಾಚರಣೆಯಲ್ಲಿವೆ. ಶೇ 40ರಷ್ಟು ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ನಿಗಮಕ್ಕೆ ಕಷ್ಟವಾಗಿದೆ.</p>.<p>ಚಾಲಕ ಮತ್ತು ನಿರ್ವಾಹಕರು ಘಟಕದಲ್ಲಿ ಕುಳಿತುಕೊಳ್ಳುವ ಬದಲು ರೊಟೋಷನ್ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡುವಂತೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶಿಸಿದ್ದಾರೆ.</p>.<p>‘ಬಸ್ಗಳ ಕಾರ್ಯಾಚರಣೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಸಿಬ್ಬಂದಿಯನ್ನಷ್ಟೇ ಕರ್ತವ್ಯಕ್ಕೆ ನೇಮಿಸಿ ಉಳಿದವರಿಗೆ ರಜೆ ನೀಡಬೇಕು. ಘಟಕಗಳಲ್ಲಿ ಹೆಚ್ಚುವರಿಯಾಗಿ 5 ಸಿಬ್ಬಂದಿಯನ್ನು ಮಾತ್ರ ನಿಯೋಜಿಸಿಕೊಳ್ಳಬೇಕು. 55 ವರ್ಷ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಆದ್ಯತೆ ಮೇರೆಗೆ ರಜೆ ನೀಡಬೇಕು’ ಎಂದು ಸೂಚನೆ ನೀಡಿದ್ದಾರೆ.</p>.<p><strong>ಸಂಬಳ ಕಡಿತ ಇಲ್ಲ</strong></p>.<p>‘ರೊಟೇಷನ್ ಆಧಾರದಲ್ಲಿ ಕೆಲಸಕ್ಕೆ ನಿಯೋಜನೆಗೊಂಡರೂ ಸಿಬ್ಬಂದಿಯ ಸಂಬಳ ಕಡಿತ ಆಗುವುದಿಲ್ಲ. ಎಲ್ಲರಿಗೂ ಸಮಾನವಾಗಿ ಕೆಲಸ ಸಿಗುವಂತೆ ನೋಡಿಕೊಳ್ಳಲಾಗುವುದು. ಅಲ್ಲದೇ ಪೂರ್ಣ ಪ್ರಮಾಣದ ಸಂಬಳ ನೀಡಲಾಗುವುದು’ ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸದ್ಯ ನಿಗಮಕ್ಕೆ ಬರುತ್ತಿರುವ ಆದಾಯ ಡೀಸೆಲ್ ವೆಚ್ಚಕ್ಕೂ ಸಾಕಾಗುತ್ತಿಲ್ಲ. 30 ಸೀಟುಗಳ ಮಿತಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಆದರೂ, ಪ್ರಯಾಣಿಕರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದರು.</p>.<p><strong>ಇಂದಿನಿಂದ ಎ.ಸಿ ಬಸ್ಗಳ ಸಂಚಾರ</strong></p>.<p>ಹವಾ ನಿಯಂತ್ರಿತ (ಎ.ಸಿ) ಬಸ್ಗಳ ಕಾರ್ಯಾಚರಣೆಯನ್ನು ಗುರುವಾರದಿಂದ (ಜೂ.25) ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಎ.ಸಿ ಬಸ್ಗಳು ಸಂಚರಿಸಲಿವೆ.</p>.<p>‘ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾತ್ರಿ ಪ್ರಯಾಣದಲ್ಲಿ ಹೊದಿಕೆ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>